ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಎಲ್ಲಿಯ ತನಕ ಒಬ್ಬ ಮುಸಲ್ಮಾನನು ತನ್ನ ತಾಯಿ, ತಂದೆ, ಮಗ, ಮಗಳು ಮತ್ತು ಇತರೆಲ್ಲ ಜನರಲ್ಲಿರುವ ಪ್ರೀತಿಗಿಂತ ಪ್ರವಾದಿಯವರಲ್ಲಿರುವ ಪ್ರೀತಿಗೆ ಪ್ರಾಶಸ್ತ್ಯ ನೀಡುವುದಿಲ್ಲವೋ ಅಲ್ಲಿಯ ತನಕ ಅವನು ಪೂರ್ಣ ರೀತಿಯಲ್ಲಿ ಸತ್ಯವಿಶ್ವಾಸಿಯಾಗುವುದಿಲ್ಲ. ಪ್ರವಾದಿಯವರಲ್ಲಿರುವ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರೀತಿಯು ಅವರನ್ನು ಅನುಸರಿಸಲು, ಅವರಿಗೆ ಸಹಾಯ ಮಾಡಲು ಮತ್ತು ಅವರಿಗೆ ಅವಿಧೇಯತೆ ತೋರದಿರಲು ಕಾರಣವಾಗಬೇಕು.